ETV Bharat / snippets

ಮೈಸೂರು: ಮನೆ ಮೇಲೆ ಕಾಡಾನೆ ದಾಳಿ - ವೃದ್ಧ ಸಾವು

author img

By ETV Bharat Karnataka Team

Published : Aug 28, 2024, 9:29 AM IST

wild elephant attack
ಮನೆ ಮೇಲೆ ಕಾಡಾನೆ ದಾಳಿ (ETV Bharat)

ಮೈಸೂರು: ಕಾಡಾನೆಯೊಂದು ಮನೆ ಮೇಲೆ ದಾಳಿ ನಡೆಸಿದ್ದು, ತೀವ್ರವಾಗಿ ಗಾಯಗೊಂಡ ವೃದ್ಧ ಸಾವನ್ನಪ್ಪಿದ್ದಾರೆ. ಹೆಚ್.ಡಿ.ಕೋಟೆ ತಾಲೂಕಿನ ಗೋಳೂರು ಹಾಡಿಯಲ್ಲಿ ಈ ಘಟನೆ ನಡೆದಿದೆ.

ಗೋಳೂರು ಹಾಡಿಯ ಕಾಳ (75) ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ವ್ಯಕ್ತಿ. ಮಂಗಳವಾರ ತಮ್ಮ ಹಾಡಿಯ ಮನೆಯಲ್ಲಿದ್ದ ಸಂದರ್ಭದಲ್ಲಿ ಕಾಡಾನೆಯೊಂದು ದಾಳಿ ಮಾಡಿ ಮನೆಯನ್ನು ಜಖಂಗೊಳಿಸಿದೆ. ದಾಳಿ ವೇಳೆ ವೃದ್ಧನಿಗೆ ಗಂಭೀರ ಗಾಯಗಳಾಗಿದ್ದವು. ಬಳಿಕ ಅರಣ್ಯ ಇಲಾಖೆ ಸಹಕಾರದೊಂದಿಗೆ ಹಾಡಿಯ ಜನರು ಹೆಚ್.ಡಿ.ಕೋಟೆ ಸರ್ಕಾರಿ ಅಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ವೃದ್ಧ ಕಾಳ ಮೃತಪಟ್ಟಿದ್ದಾರೆ. ಈ ಸಂಬಂಧ ಅಂತರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳಕ್ಕೆ ಪೊಲೀಸರು, ಅರಣ್ಯ ಇಲಾಖೆಯ ಅಧಿಕಾರಿಗಳು ಅಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿಯ ಕುಟುಂಬಕ್ಕೆ ಇಲಾಖೆಯಿಂದ ಸಿಗುವ ಸೌಲಭ್ಯಗಳನ್ನು ನೀಡಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಮಂಡ್ಯ: ಕಲುಷಿತ ನೀರು ಸೇವಿಸಿ ಇಬ್ಬರು ಸಾವು, ನಾಲ್ವರ ಸ್ಥಿತಿ ಗಂಭೀರ - Contaminated Water Tragedy

ಮೈಸೂರು: ಕಾಡಾನೆಯೊಂದು ಮನೆ ಮೇಲೆ ದಾಳಿ ನಡೆಸಿದ್ದು, ತೀವ್ರವಾಗಿ ಗಾಯಗೊಂಡ ವೃದ್ಧ ಸಾವನ್ನಪ್ಪಿದ್ದಾರೆ. ಹೆಚ್.ಡಿ.ಕೋಟೆ ತಾಲೂಕಿನ ಗೋಳೂರು ಹಾಡಿಯಲ್ಲಿ ಈ ಘಟನೆ ನಡೆದಿದೆ.

ಗೋಳೂರು ಹಾಡಿಯ ಕಾಳ (75) ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ವ್ಯಕ್ತಿ. ಮಂಗಳವಾರ ತಮ್ಮ ಹಾಡಿಯ ಮನೆಯಲ್ಲಿದ್ದ ಸಂದರ್ಭದಲ್ಲಿ ಕಾಡಾನೆಯೊಂದು ದಾಳಿ ಮಾಡಿ ಮನೆಯನ್ನು ಜಖಂಗೊಳಿಸಿದೆ. ದಾಳಿ ವೇಳೆ ವೃದ್ಧನಿಗೆ ಗಂಭೀರ ಗಾಯಗಳಾಗಿದ್ದವು. ಬಳಿಕ ಅರಣ್ಯ ಇಲಾಖೆ ಸಹಕಾರದೊಂದಿಗೆ ಹಾಡಿಯ ಜನರು ಹೆಚ್.ಡಿ.ಕೋಟೆ ಸರ್ಕಾರಿ ಅಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ವೃದ್ಧ ಕಾಳ ಮೃತಪಟ್ಟಿದ್ದಾರೆ. ಈ ಸಂಬಂಧ ಅಂತರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳಕ್ಕೆ ಪೊಲೀಸರು, ಅರಣ್ಯ ಇಲಾಖೆಯ ಅಧಿಕಾರಿಗಳು ಅಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿಯ ಕುಟುಂಬಕ್ಕೆ ಇಲಾಖೆಯಿಂದ ಸಿಗುವ ಸೌಲಭ್ಯಗಳನ್ನು ನೀಡಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಮಂಡ್ಯ: ಕಲುಷಿತ ನೀರು ಸೇವಿಸಿ ಇಬ್ಬರು ಸಾವು, ನಾಲ್ವರ ಸ್ಥಿತಿ ಗಂಭೀರ - Contaminated Water Tragedy

ETV Bharat Logo

Copyright © 2024 Ushodaya Enterprises Pvt. Ltd., All Rights Reserved.