ETV Bharat / snippets

ಲಂಚ ಸ್ವೀಕರಿಸುತ್ತಿದ್ದ ಕಂದಾಯ ಅಧಿಕಾರಿ, ಎಸ್​ಡಿಎ ಲೋಕಾಯುಕ್ತ ಬಲೆಗೆ

author img

By ETV Bharat Karnataka Team

Published : Jun 21, 2024, 1:47 PM IST

ಕಂದಾಯ ಅಧಿಕಾರಿ ಬಿ.‌ಅನ್ನಪೂರ್ಣ ಹಾಗೂ ಎಸ್​ಡಿಎ ಲಕ್ಕಪ್ಪ
ಕಂದಾಯ ಅಧಿಕಾರಿ ಬಿ.‌ಅನ್ನಪೂರ್ಣ ಹಾಗೂ ಎಸ್​ಡಿಎ ಲಕ್ಕಪ್ಪ (ETV Bharat)

ದಾವಣಗೆರೆ: ಜಿಲ್ಲೆಯ ಮಹಾನಗರ ಪಾಲಿಕೆಯ ಕಂದಾಯ ಅಧಿಕಾರಿ ಹಾಗೂ ಎಸ್​ಡಿಎ (ಎರಡನೇ ವಿಭಾಗದ ಸಹಾಯಕ) ಅಧಿಕಾರಿಗಳು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಮಹಾನಗರ ಪಾಲಿಕೆಯ ಕಂದಾಯ ಅಧಿಕಾರಿ ಬಿ.‌ ಅನ್ನಪೂರ್ಣ ಹಾಗೂ ಎಸ್​ಡಿಎ ಲಕ್ಕಪ್ಪ ಹಿಟ್ಟಿನ ಗಿರಣಿ ಮನೆಗೆ ಇ-ಸ್ವತ್ತು ಮಾಡಿ ಕೊಡಲು 15 ಸಾವಿರ ರೂಪಾಯಿ‌ ಲಂಚ ಸ್ವೀಕರಿಸುವಾಗ ಲೋಕಾಯಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ದಾವಣಗೆರೆ ನಗರದ ಬೇತೂರು ರಸ್ತೆಯ ನಿವಾಸಿ ಚಂದ್ರಶೇಖರ ಎಂಬುವವರು ತಮಗೆ ಅಧಿಕಾರಿಗಳು ಲಂಚದ ಬೇಡಿಕೆ ಇಟ್ಟಿದ್ದರ ಬಗ್ಗೆ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಬೆನ್ನಲ್ಲೇ ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪೂರೆ ನೇತೃತ್ವದಲ್ಲಿ ಡಿವೈಎಸ್ಪಿ ಕಲಾವತಿ ಇನ್ಸ್​ಪೆಕ್ಟರ್​ಗಳಾದ ಎಚ್​.ಎಸ್. ರಾಷ್ಟ್ರಪತಿ, ಪ್ರಭು ಸೂರಿನ್ ದಾಳಿ ನಡೆಸಿದ್ದರು. ಹಣ ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರಿಂದ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ದಾವಣಗೆರೆ: ಜಿಲ್ಲೆಯ ಮಹಾನಗರ ಪಾಲಿಕೆಯ ಕಂದಾಯ ಅಧಿಕಾರಿ ಹಾಗೂ ಎಸ್​ಡಿಎ (ಎರಡನೇ ವಿಭಾಗದ ಸಹಾಯಕ) ಅಧಿಕಾರಿಗಳು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಮಹಾನಗರ ಪಾಲಿಕೆಯ ಕಂದಾಯ ಅಧಿಕಾರಿ ಬಿ.‌ ಅನ್ನಪೂರ್ಣ ಹಾಗೂ ಎಸ್​ಡಿಎ ಲಕ್ಕಪ್ಪ ಹಿಟ್ಟಿನ ಗಿರಣಿ ಮನೆಗೆ ಇ-ಸ್ವತ್ತು ಮಾಡಿ ಕೊಡಲು 15 ಸಾವಿರ ರೂಪಾಯಿ‌ ಲಂಚ ಸ್ವೀಕರಿಸುವಾಗ ಲೋಕಾಯಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ದಾವಣಗೆರೆ ನಗರದ ಬೇತೂರು ರಸ್ತೆಯ ನಿವಾಸಿ ಚಂದ್ರಶೇಖರ ಎಂಬುವವರು ತಮಗೆ ಅಧಿಕಾರಿಗಳು ಲಂಚದ ಬೇಡಿಕೆ ಇಟ್ಟಿದ್ದರ ಬಗ್ಗೆ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಬೆನ್ನಲ್ಲೇ ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪೂರೆ ನೇತೃತ್ವದಲ್ಲಿ ಡಿವೈಎಸ್ಪಿ ಕಲಾವತಿ ಇನ್ಸ್​ಪೆಕ್ಟರ್​ಗಳಾದ ಎಚ್​.ಎಸ್. ರಾಷ್ಟ್ರಪತಿ, ಪ್ರಭು ಸೂರಿನ್ ದಾಳಿ ನಡೆಸಿದ್ದರು. ಹಣ ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರಿಂದ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಯುವಕನಿಗೆ 20 ವರ್ಷ ಕಾರಾಗೃಹ ಶಿಕ್ಷೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.