ETV Bharat / snippets

ಪುತ್ತೂರು: ಕೆರೆಗೆ ಹಾರಿ ರಿಕ್ಷಾ ಚಾಲಕ ಆತ್ಮಹತ್ಯೆ

author img

By ETV Bharat Karnataka Team

Published : Aug 6, 2024, 4:53 PM IST

RICKSHAW DRIVER SUICIDE
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಆತ್ಮಹತ್ಯೆ ಮಾಡಿಕೊಂಡ ರಿಕ್ಷಾ ಚಾಲಕ ಮಹಮ್ಮದ್ (ETV Bharat)

ಪುತ್ತೂರು: ರಿಕ್ಷಾ ಚಾಲಕ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಪ್ಯ ಕೊಲ್ಯ ಎಂಬಲ್ಲಿ ಇಂದು ನಡೆಯಿತು. ಪುರುಷರಕಟ್ಟೆಯ ಪಾಪೆತ್ತಡ್ಕ ನಿವಾಸಿ ಮಹಮ್ಮದ್ (48) ಆತ್ಮಹತ್ಯೆ ಮಾಡಿಕೊಂಡವರು.

ಸಂಪ್ಯದ ಕೊಲ್ಯ ಎಂಬಲ್ಲಿರುವ ಗಣಪತಿ ವಿಗ್ರಹ ವಿಸರ್ಜನೆಯ ಕೆರೆಗೆ ಮಹಮ್ಮದ್ ಹಾರಲು ಯತ್ನಿಸಿದ್ದು, ಸ್ಥಳೀಯರು ಜೋರಾಗಿ ಕೂಗಿದ್ದಾರೆ. ಆದರೂ ಅವರು ಕೆರೆಗೆ ಹಾರಿದ್ದಾರೆ. ತಕ್ಷಣ ರಕ್ಷಿಸುವ ಪ್ರಯತ್ನ ನಡೆಯಿತಾದರೂ ಅಷ್ಟರೊಳಗೆ ಸಂಪೂರ್ಣ ಮುಳುಗಿದ್ದರು.

ಪೊಲೀಸರು ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪುತ್ತೂರಿನ ಸಂಪ್ಯ ಗ್ರಾಮಾಂತರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮನೆ ಬಿಟ್ಟು ಹೋದ ತಂದೆಗಾಗಿ ಕಾಯುತ್ತಿದೆ ಮಗಳ ಶವ: ಅಂತ್ಯ ಸಂಸ್ಕಾರಕ್ಕೆ ಬರುವಂತೆ ಮನವಿ - DEAD BODY WAITING FOR FATHER

ಪುತ್ತೂರು: ರಿಕ್ಷಾ ಚಾಲಕ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಪ್ಯ ಕೊಲ್ಯ ಎಂಬಲ್ಲಿ ಇಂದು ನಡೆಯಿತು. ಪುರುಷರಕಟ್ಟೆಯ ಪಾಪೆತ್ತಡ್ಕ ನಿವಾಸಿ ಮಹಮ್ಮದ್ (48) ಆತ್ಮಹತ್ಯೆ ಮಾಡಿಕೊಂಡವರು.

ಸಂಪ್ಯದ ಕೊಲ್ಯ ಎಂಬಲ್ಲಿರುವ ಗಣಪತಿ ವಿಗ್ರಹ ವಿಸರ್ಜನೆಯ ಕೆರೆಗೆ ಮಹಮ್ಮದ್ ಹಾರಲು ಯತ್ನಿಸಿದ್ದು, ಸ್ಥಳೀಯರು ಜೋರಾಗಿ ಕೂಗಿದ್ದಾರೆ. ಆದರೂ ಅವರು ಕೆರೆಗೆ ಹಾರಿದ್ದಾರೆ. ತಕ್ಷಣ ರಕ್ಷಿಸುವ ಪ್ರಯತ್ನ ನಡೆಯಿತಾದರೂ ಅಷ್ಟರೊಳಗೆ ಸಂಪೂರ್ಣ ಮುಳುಗಿದ್ದರು.

ಪೊಲೀಸರು ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪುತ್ತೂರಿನ ಸಂಪ್ಯ ಗ್ರಾಮಾಂತರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮನೆ ಬಿಟ್ಟು ಹೋದ ತಂದೆಗಾಗಿ ಕಾಯುತ್ತಿದೆ ಮಗಳ ಶವ: ಅಂತ್ಯ ಸಂಸ್ಕಾರಕ್ಕೆ ಬರುವಂತೆ ಮನವಿ - DEAD BODY WAITING FOR FATHER

ETV Bharat Logo

Copyright © 2024 Ushodaya Enterprises Pvt. Ltd., All Rights Reserved.