ಶಿವಮೊಗ್ಗ: ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ನೇಮಕ ಮಾಡಲು ಅರ್ಹ ನ್ಯಾಯವಾದಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ಸೂಚನೆ ಮೇರೆಗೆ ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು 1977ರ ನಿಯಮ 5 ಮತ್ತು 26(2) ಹಾಗೂ 12(ಎ),(ಬಿ), (ಸಿ)ರನ್ವಯ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಆಯ್ಕೆ ಬಯಸುವವರು 10 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅನುಭವ ಹೊಂದಿರಬೇಕು. ಆಯ್ಕೆ ಬಯಸುವ ಅರ್ಹ ನ್ಯಾಯವಾದಿಗಳು ವೈಯಕ್ತಿಕ ಮಾಹಿತಿಯೊಂದಿಗೆ ಅರ್ಜಿ ಸಿದ್ದಪಡಿಸಿ, ದಿ:23-07-2024ರ ಸಂಜೆ 5 ಗಂಟೆಯೊಳಗಾಗಿ ಜಿಲ್ಲಾಧಿಕಾರಿಗಳ ನ್ಯಾಯಾಂಗ ಶಾಖೆಯಲ್ಲಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ: 08182-221100, 08182-221010, 9110642146ನ್ನು ಸಂಪರ್ಕಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ತಿಳಿಸಿದ್ದಾರೆ.
ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅನಂತ್ - ರಾಧಿಕಾ: ವೈಭವೋಪೇತ ಮದುವೆಗೆ ಸಾಕ್ಷಿಯಾದ ಅಂಬಾನಿ ಕುಟುಂಬ - Anant Radhika wedding