ರಾಯಚೂರು: ಲೋ ಬಿಪಿಯಿಂದ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಮಂಗಳವಾರ ನಡೆದಿದೆ. ವಿದ್ಯಾವಾಹಿನಿ ಶಾಲೆಯ 8ನೇ ತರಗತಿಯಲ್ಲಿ ಓದುತ್ತಿದ್ದ ತರುಣ್ ಕುಮಾರ (14) ಮೃತ ವಿದ್ಯಾರ್ಥಿ.
ವಿದ್ಯಾರ್ಥಿ ಎಂದಿನಂತೆ ಶಾಲೆಗೆ ಆಗಮಿಸಿ ತರಗತಿಯಲ್ಲಿ ಕುಳಿತಿದ್ದ. ಈ ವೇಳೆ ತನಗೆ ಕಣ್ಣು ಮಂಜಾಗುತ್ತಿದೆ ಎಂದು ಹೇಳಿ ತನ್ನ ಮುಂದಿನ ಬೆಂಚ್ನಲ್ಲಿ ಕುಳಿತುಕೊಳ್ಳಲು ಪ್ರಯತ್ನಿಸಿದಾಗ ದಿಢೀರ್ ಕುಸಿದು ಬಿದ್ದಿದ್ದಾನೆ. ಕೂಡಲೇ ಶಾಲಾ ವಾಹನದಲ್ಲಿ ಆಸ್ಪತ್ರೆಗೆ ರವಾನಿಸಿ, ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಅಷ್ಟೊತ್ತಿಗೆ ವಿದ್ಯಾರ್ಥಿ ಮೃತಪಟ್ಟಿದ್ದಾನೆ.
ಈ ಕುರಿತು ಶಾಲಾ ಆಡಳಿತ ಮಂಡಳಿ, "ವಿದ್ಯಾರ್ಥಿ ಪಾಠ ಕೇಳುವ ವೇಳೆ ಕಣ್ಣು ಮಬ್ಬಾಗುತ್ತಿದೆ ಮುಂದೆ ಬಂದು ಕುಳಿತುಕೊಳ್ಳುವೆ ಎಂದು ದಿಢೀರ್ ಕುಸಿದುಬಿದ್ದಿದ್ದಾನೆ. ಆಗಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರು ಬಿಪಿ ಲೋ ಆಗಿದ್ದರಿಂದ ಮೃತಪಟ್ಟಿದ್ದಾನೆ ಎಂದು ಹೇಳಿದ್ದಾರೆ" ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ದೊಡ್ಡಬಳ್ಳಾಪುರ: ಗಣೇಶಮೂರ್ತಿ ದರ್ಶನಕ್ಕೆ ಹೋದಾಗ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾವು - girl died due to electrocution