ETV Bharat / snippets

ಚಿಕ್ಕಬಳ್ಳಾಪುರ: ಟಿಟಿ ವಾಹನ-ಕಾರು ನಡುವೆ ಭೀಕರ ಅಪಘಾತ, ಮೂವರು ಸಾವು, 12 ಮಂದಿ ಗಾಯ

author img

By ETV Bharat Karnataka Team

Published : Aug 28, 2024, 11:00 PM IST

TERRIBLE ACCIDENT IN CHIKKABALLAPUR
ಅಪಘಾತದ ಸ್ಥಳ (ETV Bharat)

ಚಿಕ್ಕಬಳ್ಳಾಪುರ: ಟಿಟಿ ವಾಹನ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟು, 12 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಿಂತಾಮಣಿ ತಾಲೂಕಿನ ದಂಡುಪಾಳ್ಯ ಗೇಟ್ ಬಳಿ ನಡೆದಿದೆ. ನೆಲ್ಲೂರು ಮೂಲದ ಶ್ರೀಕಾಂತ್, ಶ್ರೀನಿವಾಸಲು, ಪುಷ್ಪ ಮೃತ ದುರ್ದೈವಿಗಳು.

ಕಾರು ಬೆಂಗಳೂರಿನಿಂದ ಆಂಧ್ರಪ್ರದೇಶದ ಕಡೆಗೆ ತೆರಳುತ್ತಿತ್ತು. ಆಂಧ್ರದ ಬೋಯಿಕೊಂಡದಿಂದ ಬೆಂಗಳೂರು ಕಡೆಗೆ ಟಿಟಿ ವಾಹನ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಟಿಟಿ ವಾಹನದಲ್ಲಿದ್ದ 12 ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಂತಾಮಣಿಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸುದ್ದಿ ತಿಳಿದ ತಕ್ಷಣ ಎಸ್​ಪಿ ಕುಶಾಲ್ ಚೌಕ್ಸೆ, ಎಎಸ್‌ಪಿ ಖಾಸಿಂ ರಜಾ, ಡಿವೈಎಸ್ಪಿ ಮುರಳಿಧರ್, ಸರ್ಕಲ್ ಇನ್ಸ್​ಪೆಕ್ಟರ್ ಶಿವರಾಜ್ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಗೆ ಸಂಬಂಧಿಸಿದಂತೆ ಕೇಂಚಾರ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಬಳ್ಳಾಪುರ: ಟಿಟಿ ವಾಹನ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟು, 12 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಿಂತಾಮಣಿ ತಾಲೂಕಿನ ದಂಡುಪಾಳ್ಯ ಗೇಟ್ ಬಳಿ ನಡೆದಿದೆ. ನೆಲ್ಲೂರು ಮೂಲದ ಶ್ರೀಕಾಂತ್, ಶ್ರೀನಿವಾಸಲು, ಪುಷ್ಪ ಮೃತ ದುರ್ದೈವಿಗಳು.

ಕಾರು ಬೆಂಗಳೂರಿನಿಂದ ಆಂಧ್ರಪ್ರದೇಶದ ಕಡೆಗೆ ತೆರಳುತ್ತಿತ್ತು. ಆಂಧ್ರದ ಬೋಯಿಕೊಂಡದಿಂದ ಬೆಂಗಳೂರು ಕಡೆಗೆ ಟಿಟಿ ವಾಹನ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಟಿಟಿ ವಾಹನದಲ್ಲಿದ್ದ 12 ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಂತಾಮಣಿಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸುದ್ದಿ ತಿಳಿದ ತಕ್ಷಣ ಎಸ್​ಪಿ ಕುಶಾಲ್ ಚೌಕ್ಸೆ, ಎಎಸ್‌ಪಿ ಖಾಸಿಂ ರಜಾ, ಡಿವೈಎಸ್ಪಿ ಮುರಳಿಧರ್, ಸರ್ಕಲ್ ಇನ್ಸ್​ಪೆಕ್ಟರ್ ಶಿವರಾಜ್ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಗೆ ಸಂಬಂಧಿಸಿದಂತೆ ಕೇಂಚಾರ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.