ETV Bharat / snippets

ಮಂಡ್ಯ: ಕಾರಿಗೆ ಗುದ್ದಿದ ಲಾರಿ, ಸ್ಥಳದಲ್ಲೇ ಮೂವರು ಸಾವು

author img

By ETV Bharat Karnataka Team

Published : Jul 11, 2024, 2:22 PM IST

ಮಂಡ್ಯದಲ್ಲಿ ಕಾರು ಲಾರಿ ಡಿಕ್ಕಿ ಹೊಡೆದು ಮೂವರು ಸಾವು
ಅಪಘಾತದಲ್ಲಿ ನಜ್ಜುಗುಜ್ಜಾದ ಕಾರು (ETV Bharat)

ಮಂಡ್ಯ: ಕಾರು ಮತ್ತು ಲಾರಿ ನಡುವಿನ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಾಗಮಂಗಲ ಹಾಗೂ ಪಾಂಡವಪುರ ಹೆದ್ದಾರಿಯ ಶ್ರೀ ರಾಮನಹಳ್ಳಿ ಬಳಿ ಇಂದು ನಡೆದಿದೆ.

ಚಿತ್ರದುರ್ಗದ ಯುವರಾಜ್, ತಿಪ್ಪೇಸ್ವಾಮಿ ಹಾಗೂ ಸಿದ್ದೇಶ್ ಮೃತರು. ಇವರಿದ್ದ ಕಾರಿಗೆ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಇದರ ರಭಸಕ್ಕೆ ಕಾರು ರಸ್ತೆಯಿಂದ ಪಕ್ಕಕ್ಕೆ ಸರಿದು, ಕಂಬಕ್ಕೆ ಗುದ್ದಿದೆ. ಕಾರಿನ ಎಡಭಾಗ ಸಂಪೂರ್ಣ ಛಿದ್ರಗೊಂಡಿದೆ. ಮೃತದೇಹಗಳನ್ನು ನಾಗಮಂಗಲದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹಾಸನ: ಕಣ್ಣಾಮುಚ್ಚಾಲೆ ಆಡುತ್ತಾ ನಾಪತ್ತೆಯಾದ ಬಾಲಕ ಶವವಾಗಿ ಪತ್ತೆ - Missing Boy Found Dead

ಮಂಡ್ಯ: ಕಾರು ಮತ್ತು ಲಾರಿ ನಡುವಿನ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಾಗಮಂಗಲ ಹಾಗೂ ಪಾಂಡವಪುರ ಹೆದ್ದಾರಿಯ ಶ್ರೀ ರಾಮನಹಳ್ಳಿ ಬಳಿ ಇಂದು ನಡೆದಿದೆ.

ಚಿತ್ರದುರ್ಗದ ಯುವರಾಜ್, ತಿಪ್ಪೇಸ್ವಾಮಿ ಹಾಗೂ ಸಿದ್ದೇಶ್ ಮೃತರು. ಇವರಿದ್ದ ಕಾರಿಗೆ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಇದರ ರಭಸಕ್ಕೆ ಕಾರು ರಸ್ತೆಯಿಂದ ಪಕ್ಕಕ್ಕೆ ಸರಿದು, ಕಂಬಕ್ಕೆ ಗುದ್ದಿದೆ. ಕಾರಿನ ಎಡಭಾಗ ಸಂಪೂರ್ಣ ಛಿದ್ರಗೊಂಡಿದೆ. ಮೃತದೇಹಗಳನ್ನು ನಾಗಮಂಗಲದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹಾಸನ: ಕಣ್ಣಾಮುಚ್ಚಾಲೆ ಆಡುತ್ತಾ ನಾಪತ್ತೆಯಾದ ಬಾಲಕ ಶವವಾಗಿ ಪತ್ತೆ - Missing Boy Found Dead

ETV Bharat Logo

Copyright © 2024 Ushodaya Enterprises Pvt. Ltd., All Rights Reserved.