ರಾಮನಗರ: ಎರಡು ಚಿರತೆ ಮರಿಗಳು ಮೃತಪಟ್ಟಿರುವ ಘಟನೆ ರಾಮನಗರ ತಾಲೂಕಿನ ಕೈಲಾಂಚ ಹೋಬಳಿಯ ಲಕ್ಕಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಾಡುಹಂದಿ ದಾಳಿಗೆ ಒಳಗಾಗಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ನಿಖರ ಕಾರಣ ತಿಳಿಯಲಿದೆ.
ಲಕ್ಕಪ್ಪನಹಳ್ಳಿ ಗ್ರಾಮದ ಆಸುಪಾಸಿನ ಗುಡ್ಡಗಳಲ್ಲಿ ಚಿರತೆಗಳು ವಾಸವಾಗಿದ್ದು, ಸುತ್ತಮುತ್ತ ಓಡಾಟ ನಡೆಸುತ್ತವೆ. ಆಹಾರ ಅರಸಿ ಬಂದ ಸಂದರ್ಭದಲ್ಲಿ ಸಾವನ್ನಪ್ಪಿರಬಹುದು ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ: ಕೋಲಾರ: ಕಾಡುಪ್ರಾಣಿಗಳ ಬೇಟೆಗೆ ಹಾಕಿದ್ದ ತಂತಿಯ ಉರುಳಿಗೆ ಸಿಲುಕಿ ಚಿರತೆ ಸಾವು