ETV Bharat / snippets

ಬಿಆರ್​ಟಿಯಲ್ಲಿ ಎರಡು ಆನೆ ಕಳೇಬರ ಪತ್ತೆ

author img

By ETV Bharat Karnataka Team

Published : Aug 30, 2024, 6:21 PM IST

ELEPHANT CARCASSES FOUND
ಪತ್ತೆಯಾದ ಆನೆ ಕಳೇಬರ ಪರಿಶೀಲನೆಯಲ್ಲಿ ತೊಡಗಿರುವ ಅಧಿಕಾರಿಗಳು (ETV Bharat)

ಚಾಮರಾಜನಗರ: ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯ (ಬಿಆರ್​ಟಿ) ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಬೈಲೂರು ವನ್ಯಜೀವಿ ವಲಯ ಮತ್ತು ಯಳಂದೂರು ವನ್ಯಜೀವಿ ವಲಯ ವಿಭಾಗದಲ್ಲಿ ಎರಡು ಆನೆ ಕಳೇಬರಗಳು ಪತ್ತೆಯಾಗಿವೆ. ಬೈಲೂರು ವಲಯದ ಆಳದ ಕೆರೆಯ ಬಳಿ 45-50 ವರ್ಷದ ಗಂಡಾನೆ ಕಳೇಬರ ಪತ್ತೆಯಾಗಿದ್ದು, 7-8 ತಿಂಗಳ ಹಿಂದೆ ಸ್ವಾಭಾವಿಕವಾಗಿ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಮಾಹಿತಿ ಕೊಟ್ಟಿದೆ.

ಯಳಂದೂರು ವಲಯದ ಬೇತಾಳಕಟ್ಟೆ ಎಂಬಲ್ಲಿ ಮತ್ತೊಂದು ಗಂಡಾನೆ ಆನೆ ಕಳೇಬರ ಪತ್ತೆಯಾಗಿದ್ದು, ಇದು 20-40 ದಿನಗಳ ಹಿಂದೆ ಮೃತಪಟ್ಟಿರಿಬಹುದು ಎಂದು ಅಂದಾಜು ಮಾಡಲಾಗಿದೆ. ಎರಡು ಆನೆಗಳ ದಂತಗಳು ಸುರಕ್ಷಿತವಾಗಿದ್ದು, ಅರಣ್ಯ ಇಲಾಖೆ ಮುಂದಿನ ಕ್ರಮ ಕೈಗೊಂಡಿದೆ.

ಇನ್ನು, ಆನೆ ಕಳೇಬರ ಬಹಳ ತಡವಾಗಿ ಪತ್ತೆ ಆಗಿರುವ ಬಗ್ಗೆ ಪರಿಸರ ಹೋರಾಟಗಾರ ಜೋಸೆಫ್ ಹೂವರ್ ಕಿಡಿಕಾರಿದ್ದು, ಒಂದಾನೇ ಮೃತಪಟ್ಟು 7-8 ತಿಂಗಳು, ಇನ್ನೊಂದಾನೆ ಸತ್ತು 20-40 ದಿನಗಳಾಗಿದೆ. ಇದು ಅರಣ್ಯ ಇಲಾಖೆಯ ಗಸ್ತಿನ ವೈಖರಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಚಾಮರಾಜನಗರ: ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯ (ಬಿಆರ್​ಟಿ) ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಬೈಲೂರು ವನ್ಯಜೀವಿ ವಲಯ ಮತ್ತು ಯಳಂದೂರು ವನ್ಯಜೀವಿ ವಲಯ ವಿಭಾಗದಲ್ಲಿ ಎರಡು ಆನೆ ಕಳೇಬರಗಳು ಪತ್ತೆಯಾಗಿವೆ. ಬೈಲೂರು ವಲಯದ ಆಳದ ಕೆರೆಯ ಬಳಿ 45-50 ವರ್ಷದ ಗಂಡಾನೆ ಕಳೇಬರ ಪತ್ತೆಯಾಗಿದ್ದು, 7-8 ತಿಂಗಳ ಹಿಂದೆ ಸ್ವಾಭಾವಿಕವಾಗಿ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಮಾಹಿತಿ ಕೊಟ್ಟಿದೆ.

ಯಳಂದೂರು ವಲಯದ ಬೇತಾಳಕಟ್ಟೆ ಎಂಬಲ್ಲಿ ಮತ್ತೊಂದು ಗಂಡಾನೆ ಆನೆ ಕಳೇಬರ ಪತ್ತೆಯಾಗಿದ್ದು, ಇದು 20-40 ದಿನಗಳ ಹಿಂದೆ ಮೃತಪಟ್ಟಿರಿಬಹುದು ಎಂದು ಅಂದಾಜು ಮಾಡಲಾಗಿದೆ. ಎರಡು ಆನೆಗಳ ದಂತಗಳು ಸುರಕ್ಷಿತವಾಗಿದ್ದು, ಅರಣ್ಯ ಇಲಾಖೆ ಮುಂದಿನ ಕ್ರಮ ಕೈಗೊಂಡಿದೆ.

ಇನ್ನು, ಆನೆ ಕಳೇಬರ ಬಹಳ ತಡವಾಗಿ ಪತ್ತೆ ಆಗಿರುವ ಬಗ್ಗೆ ಪರಿಸರ ಹೋರಾಟಗಾರ ಜೋಸೆಫ್ ಹೂವರ್ ಕಿಡಿಕಾರಿದ್ದು, ಒಂದಾನೇ ಮೃತಪಟ್ಟು 7-8 ತಿಂಗಳು, ಇನ್ನೊಂದಾನೆ ಸತ್ತು 20-40 ದಿನಗಳಾಗಿದೆ. ಇದು ಅರಣ್ಯ ಇಲಾಖೆಯ ಗಸ್ತಿನ ವೈಖರಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.