ETV Bharat / snippets

ಮಂಗಳೂರು: ಟ್ಯಾಂಕರ್ ಹರಿದು ಸ್ಕೂಟರ್ ಸವಾರ ಸ್ಥಳದಲ್ಲಿಯೇ ದಾರುಣ ಸಾವು

author img

By ETV Bharat Karnataka Team

Published : Jul 30, 2024, 1:42 PM IST

Water tanker hits scooter, kills rider In Mangaluru
ಅಪಘಾತದ ಸ್ಥಳ (ETV Bharat)

ಮಂಗಳೂರು: ನಗರದ ನಂತೂರು ಪದವು - ಜಂಕ್ಷನ್ ನಡುವಿನ ರಾಷ್ಟ್ರೀಯ ಹೆದ್ದಾರಿ 66ನಲ್ಲಿ ಟ್ಯಾಂಕ‌ರ್ ಹರಿದು ಸ್ಕೂಟರಿನಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮಂಗಳೂರು ನಗರದ ಅಡ್ಯಾರು ಕಣ್ಣಗುಡ್ಡೆ ನಿವಾಸಿ ಶಿವಾನಂದ ಶೆಟ್ಟಿ(42) ಮೃತರು.

ಶಿವಾನಂದ ಶೆಟ್ಟಿ ಅಡ್ಯಾರ್ ಕಣ್ಣೂರಿನಲ್ಲಿ ವಾಚ್‌ಗಳ ಬಿಡಿ ಭಾಗಗಳ ಫ್ಯಾಕ್ಟರಿಯಲ್ಲಿ ಉದ್ಯೋಗಿಯಾಗಿದ್ದರು. ಇವರು ಕಾರ್ಯ ನಿಮಿತ್ತ ನಂತೂರು ವೃತ್ತದ ಮೂಲಕ ಕದ್ರಿ ಪದವು ಕಡೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಹಿಂಭಾಗದಿಂದ ಬರುತ್ತಿದ್ದ ಟ್ಯಾಂಕರ್ ಇವರ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್ ಸವಾರ ಶಿವಾನಂದ ಶೆಟ್ಟಿ ರಸ್ತೆಗೆಸೆಯಲ್ಪಟ್ಟಿದ್ದಾರೆ. ಆದರೆ, ಟ್ಯಾಂಕರ್ ನಿಲ್ಲದೆ ಚಕ್ರ ಅವರ ತಲೆಯ ಮೇಲೆಯೇ ಹರಿದ ಪರಿಣಾಮ ಶಿವಾನಂದ ಶೆಟ್ಟಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಟ್ಯಾಂಕರ್ ಹಾಗೂ ಚಾಲಕನನ್ನು ವಶವಶಕ್ಕೆ ಪಡೆದಿದ್ದಾರೆ. ಸ್ಕೂಟರ್ ಸ್ಕಿಡ್ ಆಗಿ ಬೀಳಲು ರಸ್ತೆ ಗುಂಡಿ ಕಾರಣವೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಂಗಳೂರು: ನಗರದ ನಂತೂರು ಪದವು - ಜಂಕ್ಷನ್ ನಡುವಿನ ರಾಷ್ಟ್ರೀಯ ಹೆದ್ದಾರಿ 66ನಲ್ಲಿ ಟ್ಯಾಂಕ‌ರ್ ಹರಿದು ಸ್ಕೂಟರಿನಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮಂಗಳೂರು ನಗರದ ಅಡ್ಯಾರು ಕಣ್ಣಗುಡ್ಡೆ ನಿವಾಸಿ ಶಿವಾನಂದ ಶೆಟ್ಟಿ(42) ಮೃತರು.

ಶಿವಾನಂದ ಶೆಟ್ಟಿ ಅಡ್ಯಾರ್ ಕಣ್ಣೂರಿನಲ್ಲಿ ವಾಚ್‌ಗಳ ಬಿಡಿ ಭಾಗಗಳ ಫ್ಯಾಕ್ಟರಿಯಲ್ಲಿ ಉದ್ಯೋಗಿಯಾಗಿದ್ದರು. ಇವರು ಕಾರ್ಯ ನಿಮಿತ್ತ ನಂತೂರು ವೃತ್ತದ ಮೂಲಕ ಕದ್ರಿ ಪದವು ಕಡೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಹಿಂಭಾಗದಿಂದ ಬರುತ್ತಿದ್ದ ಟ್ಯಾಂಕರ್ ಇವರ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್ ಸವಾರ ಶಿವಾನಂದ ಶೆಟ್ಟಿ ರಸ್ತೆಗೆಸೆಯಲ್ಪಟ್ಟಿದ್ದಾರೆ. ಆದರೆ, ಟ್ಯಾಂಕರ್ ನಿಲ್ಲದೆ ಚಕ್ರ ಅವರ ತಲೆಯ ಮೇಲೆಯೇ ಹರಿದ ಪರಿಣಾಮ ಶಿವಾನಂದ ಶೆಟ್ಟಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಟ್ಯಾಂಕರ್ ಹಾಗೂ ಚಾಲಕನನ್ನು ವಶವಶಕ್ಕೆ ಪಡೆದಿದ್ದಾರೆ. ಸ್ಕೂಟರ್ ಸ್ಕಿಡ್ ಆಗಿ ಬೀಳಲು ರಸ್ತೆ ಗುಂಡಿ ಕಾರಣವೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.