ETV Bharat / snippets

ದೇವಾಲಯಕ್ಕೆ ಲೈಟಿಂಗ್​ ಅಳವಡಿಸುವಾಗ ವಿದ್ಯುತ್ ‌ಶಾಕ್: ಯುವಕ ಸಾವು

author img

By ETV Bharat Karnataka Team

Published : Aug 30, 2024, 9:46 AM IST

youth dies
ಸಾಂದರ್ಭಿಕ ಚಿತ್ರ (ETV Bharat)

ರಾಯಚೂರು: ದೇವಾಲಯಕ್ಕೆ ಲೈಟಿಂಗ್​ ಅಳವಡಿಕೆ ಮಾಡುವ ಸಂದರ್ಭದಲ್ಲಿ ವಿದ್ಯುತ್ ‌ಶಾಕ್ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಮಾನ್ವಿ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.

ಕನಕ (28) ಮೃತ ಯುವಕನೆಂದು ಗುರುತಿಸಲಾಗಿದೆ. ಗ್ರಾಮದ ಅಧಿದೇವತೆ ತಾಯಮ್ಮವ್ವ ದೇವಾಲಯದ ಬಳಿ ಘಟನೆ ನಡೆದಿದೆ. ಶ್ರಾವಣ ಮಾಸದ ಕಡೆ ಶುಕ್ರವಾರದ ಹಿನ್ನೆಲೆಯಲ್ಲಿ ಇಂದು ವಿಶೇಷ ಪೂಜೆ ಆಯೋಜಿಸಲಾಗಿದೆ. ಹೀಗಾಗಿ, ದೇವಸ್ಥಾನಕ್ಕೆ ಲೈಟಿಂಗ್ ಅಳವಡಿಕೆ ನಡೆದಿತ್ತು. ಈ ವೇಳೆ ವಿದ್ಯುತ್​ ಪ್ರವಹಿಸಿ ಯುವಕ ಮೃತಪಟ್ಟಿದ್ದಾನೆ.

ಘಟನೆ ಬಳಿಕ ಯುವಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಾನ್ವಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

ಇದನ್ನೂ ಓದಿ: ಮೈಸೂರು: ಅಪ್ರಾಪ್ತೆ ಮೇಲೆ ಅತ್ಯಾಚಾರ, ಮಗುವಿಗೆ ಜನ್ಮ; ಅಪರಾಧಿಗೆ 20 ವರ್ಷ ಸಜೆ

ರಾಯಚೂರು: ದೇವಾಲಯಕ್ಕೆ ಲೈಟಿಂಗ್​ ಅಳವಡಿಕೆ ಮಾಡುವ ಸಂದರ್ಭದಲ್ಲಿ ವಿದ್ಯುತ್ ‌ಶಾಕ್ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಮಾನ್ವಿ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.

ಕನಕ (28) ಮೃತ ಯುವಕನೆಂದು ಗುರುತಿಸಲಾಗಿದೆ. ಗ್ರಾಮದ ಅಧಿದೇವತೆ ತಾಯಮ್ಮವ್ವ ದೇವಾಲಯದ ಬಳಿ ಘಟನೆ ನಡೆದಿದೆ. ಶ್ರಾವಣ ಮಾಸದ ಕಡೆ ಶುಕ್ರವಾರದ ಹಿನ್ನೆಲೆಯಲ್ಲಿ ಇಂದು ವಿಶೇಷ ಪೂಜೆ ಆಯೋಜಿಸಲಾಗಿದೆ. ಹೀಗಾಗಿ, ದೇವಸ್ಥಾನಕ್ಕೆ ಲೈಟಿಂಗ್ ಅಳವಡಿಕೆ ನಡೆದಿತ್ತು. ಈ ವೇಳೆ ವಿದ್ಯುತ್​ ಪ್ರವಹಿಸಿ ಯುವಕ ಮೃತಪಟ್ಟಿದ್ದಾನೆ.

ಘಟನೆ ಬಳಿಕ ಯುವಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಾನ್ವಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

ಇದನ್ನೂ ಓದಿ: ಮೈಸೂರು: ಅಪ್ರಾಪ್ತೆ ಮೇಲೆ ಅತ್ಯಾಚಾರ, ಮಗುವಿಗೆ ಜನ್ಮ; ಅಪರಾಧಿಗೆ 20 ವರ್ಷ ಸಜೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.