ETV Bharat / snippets

ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ: ಓರ್ವನ ಬಂಧನ, ಉಳಿದವರಿಗಾಗಿ‌ ಶೋಧ

YOUTH STABBED
ಳೇ ಹುಬ್ಬಳ್ಳಿ ಪೊಲೀಸ್​ ಠಾಣೆ (ETV Bharat)
author img

By ETV Bharat Karnataka Team

Published : 17 hours ago

ಹುಬ್ಬಳ್ಳಿ : ಕ್ಷುಲ್ಲಕ ವಿಚಾರಕ್ಕೆ ಯುವಕನೊಬ್ಬನಿಗೆ ಚಾಕು ಇರಿದ ಘಟನೆ ಆನಂದ ನಗರದ ಮದನಿ ಮಸೀದಿ ಬಳಿ ನಡೆದಿದೆ. ವಿನಾಯಕ ಚಿತ್ರಗಾರ (21) ಇರಿತಕ್ಕೊಳಗಾದ ಯುವಕ.

ಸಮೀರ್​, ಇರ್ಫಾನ್, ದೀಪಕ್, ಬಬ್ಲು ಮತ್ತಿತರರು ಸೇರಿ ಹಲ್ಲೆ ಮಾಡಿ ಚಾಕುವಿನಿಂದ ಇರಿದಿದ್ದು, ಗಂಭೀರವಾಗಿ ಗಾಯಗೊಂಡ ವಿನಾಯಕನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎಂಟು ದಿನಗಳ ಹಿಂದೆ ವಿನಾಯಕ ಹಾಗೂ ಸಮೀರ್ ಕುಟುಂಬದ ಮಕ್ಕಳ ನಡುವೆ ಜಗಳವಾಗಿತ್ತು. ಇದೇ ಕ್ಷುಲ್ಲಕ ಕಾರಣಕ್ಕಾಗಿ ಆಕ್ರೋಶಗೊಂಡ ಸಮೀರ್ ಹಾಗೂ ಆತನ ಸ್ನೇಹಿತರು ವಿನಾಯಕನಿಗೆ ಚಾಕು ಇರಿದಿದ್ದಾರೆ. ಚಾಕುವಿನಿಂದ ಇರಿದ ಸಮೀರ್​ನನ್ನು ಬಂಧಿಸಿದ್ದು, ಉಳಿದವರಿಗಾಗಿ ಬಲೆ ಬೀಸಲಾಗಿದೆ ಎಂದು ಹಳೇ ಹುಬ್ಬಳ್ಳಿ ಪೊಲೀಸರು ತಿಳಿಸಿದ್ದಾರೆ.

ಹುಬ್ಬಳ್ಳಿ : ಕ್ಷುಲ್ಲಕ ವಿಚಾರಕ್ಕೆ ಯುವಕನೊಬ್ಬನಿಗೆ ಚಾಕು ಇರಿದ ಘಟನೆ ಆನಂದ ನಗರದ ಮದನಿ ಮಸೀದಿ ಬಳಿ ನಡೆದಿದೆ. ವಿನಾಯಕ ಚಿತ್ರಗಾರ (21) ಇರಿತಕ್ಕೊಳಗಾದ ಯುವಕ.

ಸಮೀರ್​, ಇರ್ಫಾನ್, ದೀಪಕ್, ಬಬ್ಲು ಮತ್ತಿತರರು ಸೇರಿ ಹಲ್ಲೆ ಮಾಡಿ ಚಾಕುವಿನಿಂದ ಇರಿದಿದ್ದು, ಗಂಭೀರವಾಗಿ ಗಾಯಗೊಂಡ ವಿನಾಯಕನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎಂಟು ದಿನಗಳ ಹಿಂದೆ ವಿನಾಯಕ ಹಾಗೂ ಸಮೀರ್ ಕುಟುಂಬದ ಮಕ್ಕಳ ನಡುವೆ ಜಗಳವಾಗಿತ್ತು. ಇದೇ ಕ್ಷುಲ್ಲಕ ಕಾರಣಕ್ಕಾಗಿ ಆಕ್ರೋಶಗೊಂಡ ಸಮೀರ್ ಹಾಗೂ ಆತನ ಸ್ನೇಹಿತರು ವಿನಾಯಕನಿಗೆ ಚಾಕು ಇರಿದಿದ್ದಾರೆ. ಚಾಕುವಿನಿಂದ ಇರಿದ ಸಮೀರ್​ನನ್ನು ಬಂಧಿಸಿದ್ದು, ಉಳಿದವರಿಗಾಗಿ ಬಲೆ ಬೀಸಲಾಗಿದೆ ಎಂದು ಹಳೇ ಹುಬ್ಬಳ್ಳಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಯುವಕನಿಗೆ ಚಾಕು ಇರಿದ ಬಿಎಸ್ಎಫ್ ಯೋಧ; ಸಿಸಿಟಿವಿಯಲ್ಲಿ ದೃಶ್ಯ ಸೆರೆ - young man stabbed by BSF Soldier

ETV Bharat Logo

Copyright © 2024 Ushodaya Enterprises Pvt. Ltd., All Rights Reserved.